ಗುರುವಾರ, ಫೆಬ್ರವರಿ 19, 2009

ಎಲ್ಲೋ ಇರುವ ತೇಜಸ್ವಿಯವರ ಆತ್ಮ . . .

ಸುಮ್ಮನೆ ಅಂದುಕೊಳ್ಳಿ ಸಂಜೆ ಕಾಡ ಹಾದಿಯಲ್ಲಿ ನೀವು ನಿಮ್ಮ ಎಳು ಎಂಟು ವರ್ಷದ ಮಗು ನಡೆಯುತ್ತಿರುವಾಗ ಧುತ್ತನೆ ಮೊಲಗಳ ಹಿಂಡೊಂದು ನಿಮ್ಮ ಎದುರಿಗೆ ಹಾದು ಹೊದರೆ ನಿಮ್ಮ ಮಗುವಿಗೆ ಆಗುವ ರೊಮಾಂಚನ ಹೇಗಿರಬಹುದು, ಮಲೆನಾಡಿನ ರಸ್ತೆರಲ್ಲಿ ಬೈಕ್ ನಲ್ಲಿ ಹೊಗುವಾಗ ಇದ್ದಕ್ಕಿಂದಂತೆ ನಾಲ್ಕು ಜಿಂಕೆಗಳ ಗುಂಪು ರಸ್ತೆಯಾಚೆ ಜಿಗಿದರೆ ಆಗುವ ಅನುಭೂತಿ , ಇದ್ದಕ್ಕಿಂದಂತೆ ರಸ್ತೆಯಲ್ಲಿ ಆನೆ ಒಂದು ಅಡ್ಡ ಬಂದರೆ ಆ ಕ್ಷಣದಲ್ಲಿ ನಿಮಗೆ ಆಗುವ ಭಯ * ಅದರ ಕಾಲಲ್ಲಿ ಸರಪಳಿ ನೂಡಿ ಅದು ಸಾಕಿದ ಆನೆ ಎಂದು ತಿಳಿದಾಗ ನಿಮಾಗಾಗುವ ಸಮಾಧಾನ ಎಂತದ್ದು , ಪ್ರಕೃತಿ ಮತ್ತು ಮನುಷ್ಯನ ಸಂಬಧವೇ ಹೀಗೆ ಇದೊಂದು ಅದ್ಬುತ ಪ್ರಕೃತಿಯೊಳಗಿನ ನಿಶ್ಯಬ್ದ , ನಿಗೊಢ , ರಹಸ್ಯ , ರೊಮಾಂಚನ ಜಗತ್ತು ಮನುಷ್ಯನಿಗೆ ಎಂದಿಗೊ ಸವಾಲೇ? ಒಮ್ಮ ನಾನು ನನ್ನ ಬಾಲ್ಯಕ್ಕೆ ಹಿಂದುರಿಗಿ ನೊಡಿದರೆ ಮನದ ನೆನಪಿನ ಹಂದರದಲ್ಲಿ ನೂರಾರು ನೆನಪುಗಳು ಪ್ರಕೃತಿ, ಪರಿಸರದೊಂದಿಗೆ ಹೊಂದಿಕೊಂಡಂತಿವೆ. ನನಗೆ ನಮ್ಮ ಮನೆ ಕಿಟಕಿಯಲ್ಲಿ ಗೊಡು ಕಟ್ಟಿದ ಗುಬ್ಬಚ್ಚಿ , ನಮ್ಮ ನುಗ್ಗೆ ಮರಕ್ಕೆ ಪ್ರತಿ ವರ್ಷ ಬಂದು ಹತ್ತಿಕೊಳ್ಳುವ ಕಂಬಳಿ ಹುಳುಗಳ ದಂಡು , ನೆರಳೆ ಮರದ ಪಿಳಿಕಾರ ಹಕ್ಕಿಯ ಮೊಟ್ಟೆಗಾಗಿ ಕಾಯುವ ಹಾವು , ಮಳೆಗಾಲದಲ್ಲಿ ಶಾಲೆಗೆ ಹೊಗುವ ದಾರಿಯ ನಿರಿನಲ್ಲಿ ತೇಲುವ ಆಮೆ , ಏಡಿ , ನಾವು ಹೊಳೆಗೆ ಹೊಗುತ್ತಿದ್ದಾಗ ಹಿಡಿಯುತ್ತಿದ್ದ ಕಲ್ಲು ಕುರಿಕಿ ಮಿನು (ಮೀನಿನ ಒಂದು ಜಾತಿ) ಕಾಡಿನಲ್ಲಿ ನಾವೇ ಮಾಡಿಕೊಂಡು ತಿನ್ನುತ್ತಿದ್ದ ಊಟದ ರುಚಿ , ಇವೆಲ್ಲ ಇನ್ನು ನನ್ನ ನೆನಪಿನಂಗಳದಲ್ಲಿ ಹಚ್ಚ ಹಸಿರಾದ ಹೆಜ್ಜೆ ಗುರುತುಗಳಾಗಿವೆ. ಇಂದು ಮಲೆನಾಡಿನ ಆ ನಿಗೊಢ , ನಿಷ್ಯಬ್ದ , ರೊಮಾಂಚಕ, ಅರಣ್ಯಗಳು ಇಲ್ಲದೆ ಇರಬಹುದು ಅದಕ್ಕೆ ಕಾರಣ ಮನುಷ್ಯನ ಕ್ರೌರ್ಯ, ಇದೆಲ್ಲ ಯಾಕೆ ಹೇಳಿದೆ ಅಂದರೆ ನಿನ್ನೆ ಲೈಬ್ರರಿಯ ಕನ್ನಡ ವಿಭಾಗದಲ್ಲಿ ಸುಮ್ಮನೆ ಪುಸ್ತಕಕ್ಕಾಗಿ ಅಲೆಯುತ್ತಿದ್ದಾಗ ಕೈಗೆ ಸಿಕ್ಕ ಪುಸ್ತಕವೇ ಕೆ.ಪಿ. ಪೊರ್ಣಚಂದ್ರ ತೇಜಸ್ವಿಯವರ ಪರಿಸರದ ಕಥೆ  ಪುಸ್ತಕದ ಶಿರ್ಷಿಕೆ ಅಷ್ಟಾಗಿ ಆಸಕ್ತಿ ಕೆರಳಿಸದಿದ್ದರು ತೇಜಸ್ವಿಯವರದು ಚೆನ್ನಾಗಿರಬಹುದು ಎಂದು ಒದಲು ಕುಳಿತಾಗ ಇಡೀ ೧೪೪ ಪುಟಗಳನ್ನು ಒಂದೆ ಗುಕ್ಕಿನಲ್ಲಿ ಒದಿಸಿಕೊಂಡಿತು. ಆಮೇಲೆ ಅನ್ನಿಸಿದ್ದು , ಅದು ಕಥೆಯ , ಅವರೇ ಎಲ್ಲೊ ಎದುರಿಗೆ ನಿಂತು ಹೇಳುತ್ತಿರುವಂತೆ ಭಾಸವಾಗುವ ಭಾವವ , ಅಥವ ಮಲೆನಾಡಿನ ಕಾಡಿನ ವೈಚಿತ್ರವ ಎಂಬ ಪ್ರಶ್ನೆಗಳು ಮನದಲ್ಲಿ ಉಳಿದುಕೊಂಡವು ಮೂಡಿಗೆರೆUಯಲ್ಲಿ ಕಾಫಿ ತೋಟ ಮಾಡುವ ಸಲುವಾಗಿ ಬಂದ ತೆಜಸ್ವಿಯವರು ತಮ್ಮ ಮತ್ತು ತಮ್ಮ ಸುತ್ತಲಿನ ಪ್ರಕೃತಿ ಮತ್ತು ಪರಿಸರದ ನಡುವಿನ ಸಂಭಂದವನ್ನು ಅಕ್ಷರ ರೊಪದಲ್ಲಿ ಕಟ್ಟಿಕೊಟ್ಟ ಉತ್ತಮ ಕೃತಿ ಅದು. ಅದರಲ್ಲಿ ಅವರು ಎದುರುಗೊಳ್ಳುವ ಸನ್ನಿವೇಷಗಳು ಅದನ್ನು ವಿವರಿಸಿವ ಅವರ ವೈಚಾರಿಕಥೆ ಆ ಮೂಲಕ ಅವರಿಗೆ ದೊರೆಯುವ ಉತ್ತರ , ಕೆಲವೂಮ್ಮ ಪ್ರಶ್ನೇಗಳಾಗಿಯೇ ಉಳಿಯುವ ಪ್ರಶ್ನೇಗಳು ಎಲ್ಲವನ್ನು ಮನೊಙವಾಗಿ ಚಿತ್ರಿಸಿದ್ದಾರೆ ಈ ಪುಸ್ತಕಲ್ಲಿ ಅವರ ಜೊತೆ ಇರುವ ಕಿವಿ(ಅವರ ಸಾಕು ಬೇಟೆ ನಾಯಿ) ಮಾರ , ಮಾಸ್ತಿ , ಬೈರ , ಶ್ರೀರಾಮ ಎಲ್ಲರು ಮನುಷ್ಯನ ಒಂದೊಂದು ಭಾವದ ಪ್ರತಿನಿಧಿಗಳಂತೆ ಕಾಣುತ್ತಾರೆ ಒಟ್ಟಾರೆ ಇಂದು ಮನುಷ್ಯ ನಗರಿಕರಣ ನಾಗರೀಕರಣದ ಹೆಸರಿನಲ್ಲಿ ಪ್ರಕೃತಿಯ ನಡುವಿನ ಗಾಢ ಮತ್ತು ವಿವರಿಸಲಾಗದ ಸಂಬಂಧಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಇಂದು ಒಂದು ಮಗುವಿಗೆ ಕಾಡಿನ ಬಗ್ಗೆ ಅದರಲ್ಲಿನ ಪ್ರಾಣಿಗಳ ಬಗ್ಗೆ ಪುಸ್ತಕದಲ್ಲಿ ಹೇಳುವ ಸನ್ನಿವೇಷ ಬಂದಿದೆ ಕಡೇ ಪಕ್ಷ ಈ ರೀತಿಯ ಪುಸ್ತಕಗಳಾದರು ಇವೆ ಇನ್ನು ಹತ್ತು ಹದಿನೈದು ವರ್ಷಗಳಲ್ಲಿ ಅವು ನಮ್ಮಿಂದ ಮರೆಯಾಗುತ್ತವೆ ಕಾಡೇ ಇಲ್ಲದ ಮೇಲೆ ಅದರಲ್ಲಿ ಬದುಕುವವರಾರು ಕಾಡಿನ ಬಗ್ಗೆ ಬರೆಯುವವರಾರು. ಮಾನವನ ಜೀವನ ಮತ್ತು ಪರಿಸರದ ನಡುವಿನ ಸಂಬಂಧ ನಿಜವಾಗಲು ಅದ್ಬುತ ಆ ಸಂತೋಷ , ಸಂಭ್ರಮ , ರೊಮಾಂಚನ ಎಷ್ಟು ಹಣಕೊಟ್ಟರು ಸಿಗಲಾರದು. ನಿಮ್ಮ ಮಗು ಬೆಲಿಯಲ್ಲಿನ ಒತಿಕ್ಯತ , ಇದ್ದಕ್ಕಿಂದಂತೆ ಎದುರಾಗಿ ಮಾಯವಾಗುವ ಮೊಲ , ಜಿಂಕೆ , ಭಯ ಹುಟ್ಟಿಸುವ ಆನೆ , ಇವುಗಳಿಗೆ ರೊಮಾಂಚನಗೊಂಡಷ್ಟು ಬೇರಾವುದಕ್ಕು ರೊಮಾಂಚನಗೊಳ್ಳಲು ಸಾಧ್ಯವಿಲ್ಲ. ಒಂದು ಮಗುವಿನ ಸರ್ವತೊಮುಖ ಬೆಳವಣಿಗೆ ಅದರ ಸುತ್ತಲಿನ ಪರಿಸರವನ್ನು ಅವಲಂಬಿಸಿದೆ ಎಂದು ತಿಳಿದವರು ಹೇಳುತ್ತಾರೆ. ಆ ಉತ್ತಮ ಪರಿಸರ ನಿರ್ಮಿಸಿಕೊಡುವ ಕರ್ತವ್ಯ ನಮ್ಮ ಮೇಲಿದೆ ಅದರ ಮೂದಲ ಪ್ರಯತ್ನವಾಗಿ ಕೆ.ಪಿ. ಪೊರ್ಣಚಂದ್ರ ತೆಜಸ್ವಿಯವರ ಪರಿಸರದ ಕಥೆ ಪುಸ್ತಕ ಮನೆಗೆ ತಂದು ನಿಮ್ಮ ಮಕ್ಕಳ ಕೈಗೆ ಕೊಡಿ. ಒಮ್ಮೆ ಒದಿ ರೊಮಾಂಚನಗೊಳ್ಳಲಿ ಆಶ್ಚರ್ಯಗೊಳ್ಳಲಿ ಪ್ರಕೃತಿ ಮತ್ತು ಪರಿಸರದ ಬಗ್ಗೆ ಜಾಗೃತರಾಗಲಿ. ನಾಗರಿಕಥೆಯ ಹೆಸರಿನಲ್ಲಿ ಕಾಡಿನ ನಿಜವಾದ ಅನುಭವಗಳನ್ನು ಮಕ್ಕಳಿಗೆ ಕೊಡಲಾಗದಷ್ಟು ದೊರ ಬಂದಿದ್ದೆವೆ. ಕೊನೆ ಪಕ್ಷ ಆ ಅನುಭವಗಳ ಪುಸ್ತಕ ರೂಪವನ್ನಾದರು ನೀಡುವ. ಪುಟ್ಟ ಮಗುವಿನ ಕೈಯಲ್ಲಿ ಪರಿಸರದ ಪುಸ್ತಕ ನೋಡಿ ಎಲ್ಲೊ ಇರುವ ತೇಜಸ್ವಿಯವರ ಆತ್ಮ ಸಂತಸದಿಂದ ಮಗ್ಗಲು ಬದಲಿಸಿ ನಕ್ಕಂತಾಗಲಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ